Thursday, September 3, 2026
spot_img
More
    spot_img
    HomeMahakumbh Mela 2025ಮಹಾಕುಂಭಮೇಳ ಕಾಲ್ತುಳಿತದಲ್ಲಿ ರಾಜ್ಯದ ನಾಲ್ವರು ಸಾವನ್ನಪ್ಪಿರುವ ಶಂಕೆ: ಕೃಷ್ಣಬೈರೇಗೌಡ

    ಮಹಾಕುಂಭಮೇಳ ಕಾಲ್ತುಳಿತದಲ್ಲಿ ರಾಜ್ಯದ ನಾಲ್ವರು ಸಾವನ್ನಪ್ಪಿರುವ ಶಂಕೆ: ಕೃಷ್ಣಬೈರೇಗೌಡ

    ಬೆಂಗಳೂರು: ಪ್ರಯಾಗ್ರಾಜ್ ಕುಂಭಮೇಳ ಕಾಲ್ತುಳಿತ ದುರಂತದಲ್ಲಿ ರಾಜ್ಯದ ನಾಲ್ಕು ಜನ ಮೃತಪಟ್ಟಿರುವ ಬಗ್ಗೆ ಶಂಕೆ ಇದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು.

    Advertisement

    ವಿಕಾಸಸೌಧದ ಕಚೇರಿಯಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, “ಬೆಳಗಾವಿ ತಾಲೂಕು ಯಲ್ಲೂರು ರಸ್ತೆ ವಡಗಾಂವ್ ಭಾಗದ ಮೇಘಾ ದೀಪಕ್ ಹತ್ತರವರ್ (24), ಜ್ಯೋತಿ ದೀಪಕ್ ಹತ್ತರವರ್ (44) ಹಾಗೂ ಬೆಳಗಾವಿ ತಾಲೂಕಿನ ಶೆಟ್ಟಿಗಲ್ಲಿ ಭಾಗದ ಅರುಣಾ ಖೋರ್ಪಡೆ (61), ಮಹಾದೇವಿ ಹಣಮಂತ ಬಾವಣೂರ (48) ಮೃತಪಟ್ಟಿರುವ ಸಾಧ್ಯತೆ ಇದೆ ಎಂದರು.

    ರಾಜ್ಯದ ವಿಪತ್ತು ನಿರ್ವಹಣಾ ತಂಡ ಉತ್ತರಪ್ರದೇಶ ಸರ್ಕಾರದ ಜೊತೆ ನಿರಂತರ ಸಂಪರ್ಕದಲ್ಲಿದೆ. ಆದರೆ, ಉತ್ತರಪ್ರದೇಶ ಸರ್ಕಾರ ಪ್ರಯಾಗ್ರಾಜ್ ಕುಂಭಮೇಳ ದುರುಂತದಲ್ಲಿ ರಾಜ್ಯದ ಎಷ್ಟು ಜನ ಮೃತಪಟ್ಟಿದ್ದಾರೆ, ಎಷ್ಟು ಜನ ಗಾಯಾಳುಗಳಾಗಿದ್ದಾರೆ ಎಂಬ ಕುರಿತು ಯಾವುದೇ ಮಾಹಿತಿ ನೀಡುತ್ತಿಲ್ಲ. ಬೆಳಗಾವಿ ಜಿಲ್ಲಾಧಿಕಾರಿ ಸ್ವತಃ ಕುಂಭಮೇಳಕ್ಕೆ ತೆರಳಿದವರ ಕುಟುಂಬದವರನ್ನು ಸಂಪರ್ಕಿಸಿ ನಾಲ್ಕು ಜನ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದರು.

    ಬಿಜೆಪಿ ನಾಯಕರ ಸಹಾಯದಿಂದ ಬೆಳಗಾವಿ ಜಿಲ್ಲೆಯ 300 ಕ್ಕಿಂತ ಹೆಚ್ಚು ಜನ ಕುಂಭಮೇಳಕ್ಕೆ ಪ್ರಯಾಣ ಮಾಡಿದ್ದಾರೆ ಎಂಬ ಮಾಹಿತಿ ಇದೆ. ಈ ನಡುವೆ ಉತ್ತರ ಪ್ರದೇಶ ಸರ್ಕಾರ ಯಾವುದೇ ಮಾಹಿತಿ ನೀಡದ ಹಿನ್ನೆಲೆ ಕನ್ನಡಿಗರ ಹಿತರಕ್ಷಣೆಗಾಗಿ ಓರ್ವ ಐಎಎಸ್ ಅಧಿಕಾರಿ, ಬೆಳಗಾವಿ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ (ಎಡಿಸಿ) ಹಾಗೂ ಪೊಲೀಸ್ ಅಧಿಕಾರಿಯೊಬ್ಬರನ್ನೊಳಗೊಂಡ ಮೂರು ಜನರ ತಂಡವನ್ನು ಈಗಾಗಲೇ ಪ್ರಯಾಗ್ರಾಜ್ಗೆ ಕಳುಹಿಸಲಾಗಿದೆ ಎಂದರು.

    ಈ ಸಂಬಂಧ ಸಹಾಯವಾಣಿಯನ್ನೂ ತೆರೆದಿದ್ದು, ಕುಂಭಮೇಳಕ್ಕೆ ಹೊರಟು ಕುಟುಂಬಸ್ಥರ ಸಂಪರ್ಕಕ್ಕೆ ಸಿಗದವರ ಬಗ್ಗೆ ಮಾಹಿತಿ ನೀಡಲು ಕೋರಿದೆ. ಸಹಾಯವಾಣಿ:- 80-22340676


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading