Saturday, September 19, 2026
spot_img
More
    spot_img
    HomeLatest newsಅಂಬೇಡ್ಕರ್‌ ಏನು ಕೊಟ್ಟಿಲ್ಲ ಅದು ನಮಗೆ ಬೇಕಾಗಿಲ್ಲ; ಸಂವಿಧಾನ ತಿದ್ದುಪಡಿ ಬಗ್ಗೆ ಅಶ್ವಥ್‌ ನಾರಾಯಣ್‌ ಹೇಳಿದ್ದಿಷ್ಟು

    ಅಂಬೇಡ್ಕರ್‌ ಏನು ಕೊಟ್ಟಿಲ್ಲ ಅದು ನಮಗೆ ಬೇಕಾಗಿಲ್ಲ; ಸಂವಿಧಾನ ತಿದ್ದುಪಡಿ ಬಗ್ಗೆ ಅಶ್ವಥ್‌ ನಾರಾಯಣ್‌ ಹೇಳಿದ್ದಿಷ್ಟು

    ಬೆಂಗಳೂರು: ಬಾಬಾ ಸಾಹೇಬ್‌ ಅಂಬೇಡ್ಕರ್‌ ರಚಿಸಿರುವ ಭಾರತದ ಸಂವಿಧಾನ ಸದ್ಯ ರಾಜಕೀಯ ನಾಯಕರ ಕಿತ್ತಾಟಕ್ಕೆ ಬಳಕೆಯಾಗುತ್ತಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್‌ ಎರಡೂ ಪಕ್ಷಗಳ ನಾಯಕರು ವಾದ ಪ್ರತಿವಾದದಲ್ಲಿ ಮುಳುಗಿದ್ದಾರೆ.

    Advertisement

    ಆರ್‌ಎಸ್‌ಎಸ್‌ನ ಪ್ರಧಾನ ಕಾರ್ಯದರ್ಶಿ ದತ್ತಾತ್ತೇಯ ಹೊಸಬಾಳೆ ಅವರು ಇತ್ತೀಚೆಗಷ್ಟೆ ಸಂವಿಧಾನದ ಕುರಿತು ನೀಡಿದ ತಿದ್ದುಪಡಿಯ ಹೇಳಿಕೆ ಸದ್ಯ ವಿವಾದವನ್ನು ಎಬ್ಬಿಸಿದ್ದು, ಕಾಂಗ್ರೆಸ್‌ ನಾಯಕರು ಈ ಹೇಳಿಕೆ ವಿರುದ್ಧ ತಿರುಗಿಬಿದ್ದಿದ್ದಾರೆ. ಸಂವಿಧಾನದ ಪ್ರಸ್ತಾವನೆಯಲ್ಲಿರುವ ಸಮಾಜವಾದ ಹಾಗೂ ಜಾತ್ಯಾತೀತ ಈ ಎರಡೂ ಪದಗಳು ಅಂಬೇಡ್ಕರ್‌ ರಚಿಸಿದ್ದ ಸಂವಿಧಾನದಲ್ಲಿರಲಿಲ್ಲ, ಬಳಿಕ ಕಾಂಗ್ರೆಸ್‌ ಸೇರಿಸಿದ್ದು, ಆ ಎರಡು ಪದಗಳನ್ನು ತೆಗೆದುಹಾಕಬೇಕು ಎಂದಿದ್ದರು.

    ಈ ಹೇಳಿಕೆ ಕುರಿತು ಸದ್ಯ ‍ಅಶ್ವಥ್‌ ನಾರಾಯಣ್‌ ಪ್ರತಿಕ್ರಿಯಿಸಿದ್ದು, ದತ್ತಾತ್ರೇಯ ಹೊಸಬಾಳೆ ಅವರ ಹೇಳಿಕೆ ಸರಿ ಇದೆ ಎಂದು ಸಮರ್ಥಿಸಿಕೊಂಡಿದ್ದಾರೆ. ಅಂಬೇಡ್ಕರ್‌ ಅವರು ಸಂವಿಧಾನ ರಚಿಸುವ ಮುನ್ನ ಆ ಕಾಲಕ್ಕೆ ಇದ್ದ ಇತರೆ ದೇಶಗಳ ಸಂವಿಧಾನವನ್ನು ಓದಿ ಬಳಿಕ ದೇಶದ ಸಂಸ್ಕೃತಿ ಹಾಗೂ ಜನರ ಭಾವನೆಗಳನ್ನು ಅರ್ಥ ಮಾಡಿಕೊಂಡು ಹಗಲು ಇರುಳು ಶ್ರಮಿಸಿದರು. ಆದರೆ ಇಂದಿರಾ ಗಾಂಧಿ ಅವರು ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ನ್ಯಾಯಾಂಗದ ಸಂಪೂರ್ಣ ಅಧಿಕಾರವನ್ನು ಮೊಟಕುಗೊಳಿಸಿ, ಪತ್ರಕರ್ತರ ಅಧಿಕಾರವನ್ನು ಮೊಟಕುಗೊಳಿಸಿ, ಸಾರ್ವಜನಿಕರ ಮೂಲಭೂತ ಹಕ್ಕನ್ನು ಮೊಟಕುಗೊಳಿಸಿ, ಆ ಸಂದರ್ಭದಲ್ಲಿ ಇಂದಿರಾ ಗಾಂಧಿಯವರ ಆಲೋಚನೆಯನ್ನು ತಂದುಹಾಕಿದ್ದಾರೆ ಎಂದು ಆರೋಪಿಸಿದರು.

    ಅಲ್ಲದೇ ಜಾಗತೀಕರಣ, ಖಾಸಗೀಕರಣ ತಂದವರು ಇದೇ ಕಾಂಗ್ರೆಸ್‌ನವರು. ಹೀಗಾಗಿ ದತ್ತಾತ್ರೇಯ ಹೊಸಬಾಳೆ ಅವರು ಕಾಂಗ್ರೆಸ್‌ ಮಾಡಿರುವ ತಪ್ಪನ್ನು ಬಹಳ ಸ್ಪಷ್ಟವಾಗಿ ಹೇಳಿದ್ದಾರೆ. ಜಾತ್ಯಾತೀತ ಹಾಗೂ ಸಮಾಜವಾದ ಎನ್ನುವುದು ಅಂಬೇಡ್ಕರ್‌ ಕೊಟ್ಟಿದ್ದಲ್ಲ, ಇಂದಿರಾ ಗಾಂಧಿ ಅವರ ಕೊಡುಗೆ, ಅಂಬೇಡ್ಕರ್‌ ಏನು ಕೊಟ್ಟಿಲ್ಲ ಅದು ನಮಗೆ ಬೇಕಾಗಿಲ್ಲ ಎಂದು ಹೇಳಿದರು.

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗೆ ಇಲ್ಲಿ ಕ್ಲಿಕ್‌ ಮಾಡಿ

    ಡಿಸೆಂಬರ್‌ ಬಳಿಕ ವಿಧಾನಸಭೆ ಚುನಾವಣೆ; 150 ಸೀಟ್‌ಗಳೊಂದಿಗೆ ಬಿಜೆಪಿ ಅಧಿಕಾರಕ್ಕೆ: ಗೋವಿಂದ ಕಾರಜೋಳ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading