Wednesday, September 2, 2026
spot_img
More
    spot_img
    HomeStateDistrictಧರ್ಮಸ್ಥಳ: ಮಳೆ ಬಂದರೂ ನಿಲ್ಲದ ಸಮಾಧಿ ಅಗೆಯುವ ಕಾರ್ಯ; ಸ್ನಾನಘಟ್ಟದ ಬಳಿ ಸಿಗಲಿದೆಯಾ ಅಸ್ತಿಪಂಜರ?

    ಧರ್ಮಸ್ಥಳ: ಮಳೆ ಬಂದರೂ ನಿಲ್ಲದ ಸಮಾಧಿ ಅಗೆಯುವ ಕಾರ್ಯ; ಸ್ನಾನಘಟ್ಟದ ಬಳಿ ಸಿಗಲಿದೆಯಾ ಅಸ್ತಿಪಂಜರ?

    ದಕ್ಷಿಣ ಕನ್ನಡ: ಧರ್ಮಸ್ಥಳ ಸರಣಿ ಕೊಲೆ, ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ಭರದಿಂದ ಸಾಗಿದ್ದು, ಸಾಕ್ಷಿ ದೂರುದಾರ ಗುರುತಿಸಿದ್ದ ಸ್ಥಳಗಳಲ್ಲಿ ಸಮಾಧಿ ಅಗೆಯುವ ಕಾರ್ಯ ಆರಂಭವಾಗಿದೆ.

    Advertisement

    ನಿನ್ನೆ ( ಜುಲೈ 28 ) ಸಾಕ್ಷಿ ದೂರುದಾರನನ್ನು ನೇತ್ರಾವತಿ ಸ್ನಾನಘಟಕ್ಕೆ ಕರೆತಂದಿದ್ದ ಎಸ್‌ಐಟಿ ಅಧಿಕಾರಿಗಳು 13 ಸ್ಥಳಗಳನ್ನು ಮಾರ್ಕ್‌ ಮಾಡಿ, ಪ್ರವೇಶ ನಿಷಿದ್ಧ ಟೇಪ್‌ ಎಳೆದು ಭಯೋತ್ಪಾದಕ ನಿಗ್ರಹ ದಳದ ಭದ್ರತೆ ಇರಿಸಲಾಗಿತ್ತು.

    ನೇತ್ರಾವತಿ ಸ್ನಾನಘಟ್ಟದ ಸುತ್ತಮುತ್ತ 13 ಸ್ಥಳಗಳನ್ನು ಗುರುತಿಸಿದ್ದು, ಇಂದು ಆ ಸ್ಥಳಗಳಿಗೆ ಗುಂಡಿ ಅಗೆಯುವ ಕಾರ್ಮಿಕರನ್ನು ಕರೆತರಲಾಗಿದೆ. ಈ ಮೂಲಕ ಸ್ನಾನಘಟ್ಟದ ಸಮೀಪ ಸಮಾಧಿ ಅಗೆಯುವ ಕಾರ್ಯ ಆರಂಭವಾಗಿದೆ.

    ಇನ್ನು ಸಮಾಧಿ ಅಗೆಯುವ ವೇಳೆ ಮಳೆಯಾಗಿದ್ದು, ಮಳೆಯನ್ನು ಸಹ ಲೆಕ್ಕಿಸದೇ ಪ್ರಕ್ರಿಯೆಯನ್ನು ಮುಂದುವರಿಸಲಾಗಿದ್ದು, ಯಾವ ಸ್ಥಳದಲ್ಲಿ ಅಸ್ತಿಪಂಜರ ಸಿಗಲಿದೆ ಎಂಬುದು ಭಾರೀ ಕುತೂಹಲ ಕೆರಳಿಸಿದೆ.

    ಧರ್ಮಸ್ಥಳ ಪ್ರಕರಣದಲ್ಲಿ ಸ್ಪೋಟಕ ಬೆಳವಣಿಗೆ: ನೇತ್ರಾವತಿ ಸ್ನಾನಘಟ್ಟದ ಸಮೀಪ ಸಮಾಧಿ ಅಗೆಯುವ ಪ್ರಕ್ರಿಯೆ ಆರಂಭ

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗೆ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading