Wednesday, August 12, 2026
spot_img
More
    spot_img
    HomeEntertainmentಬಾಕ್ಸಾಪೀಸ್‌ನಲ್ಲಿ ಮ್ಯಾಕ್ಸ್‌ ಅಬ್ಬರದ ನಡುವೆ ಚಾಮುಂಡೇಶ್ವರಿ ದರ್ಶನ ಪಡೆದ ಕಿಚ್ಚ ಸುದೀಪ್‌

    ಬಾಕ್ಸಾಪೀಸ್‌ನಲ್ಲಿ ಮ್ಯಾಕ್ಸ್‌ ಅಬ್ಬರದ ನಡುವೆ ಚಾಮುಂಡೇಶ್ವರಿ ದರ್ಶನ ಪಡೆದ ಕಿಚ್ಚ ಸುದೀಪ್‌

    ಮೈಸೂರು: ಕಿಚ್ಚ ಸುದೀಪ್‌ ನಟನೆಯ ʼಮ್ಯಾಕ್ಸ್‌ʼ ಸಿನಿಮಾ ಬಿಡುಗಡೆಗೊಂಡು ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿ ಬೆಟ್ಟಕ್ಕೆ ನಟ ಕಿಚ್ಚ ಸುದೀಪ್‌ ಅವರು ಭೇಟಿ ನೀಡಿ ತಾಯಿಯ ದರ್ಶನ ಪಡೆರು ವಿಶೇಷ ಪೂಜೆ ಸಲ್ಲಿಸಿದರು.

    Advertisement

    ಇಂದು ಮುಂಜಾನೆಯೇ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಕಿಚ್ಚ ಸುದೀಪ್‌ ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ, ನಾಡಿಗೆ ಒಳಿತಾಗುವಂತೆ ಪ್ರಾರ್ಥನೆ ಸಲ್ಲಿಸಿದರು.

    ನೆಚ್ಚಿನ ನಟ ಬರುತ್ತಿದ್ದಾರೆಂಬ ಸುದ್ದಿ ತಿಳಿದ ಅಸಂಖ್ಯಾತ ಅಭಿಮಾನಿಗಳು ಚಾಮುಂಡಿಬೆಟ್ಟದಲ್ಲಿ ಜಮಾಯಿಸಿದ್ದು ವಿಶೇಷವೆನಿಸಿತ್ತು.

    ದೇವಾಲಯಕ್ಕೆ ಆಗಮಿಸಿದ್ದ ಸಾರ್ವಜನಿಕರು ನೆಚ್ಚಿನ ನಟನನ್ನು ಕಂಡು ಶಿಳ್ಳೆ ಒಡೆದು ಜೈಕಾರ ಕೂಗಿದರು. ನಂತರ ಸುದೀಪ್‌ ಅಭಿಮಾನಿಗಳತ್ತ ಕೈ ಬೀಸಿದರು. ಈ ವೇಳೆ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.

    ʼಮ್ಯಾಕ್ಸ್‌ʼ ಸಿನಿಮಾ ಇದೇ ತಿಂಗಳ 25ರಂದು ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಬಿಡುಗಡೆಯಾಗಿ 4ನೇ ದಿನ ಪೂರೈಸಿದ್ದು ಭರ್ಜರಿ ಕಲೆಕ್ಷನ್‌ ಮಾಡುತ್ತಿದೆ.

    ಸದ್ಯ ಬಾಕ್ಸಾಪೀಸ್‌ನಲ್ಲಿ ಸೂಪರ್‌ ಸ್ಟಾರ್‌ ಉಪೇಂದ್ರ ನಿರ್ದೇಶಿಸಿ ನಟಿಸಿರುವ ಯುಐ ಸಿನಿಮಾ ಭರ್ಜರಿ ಸದ್ದು ಮಾಡುತ್ತಿರುವ ಬೆನ್ನಲ್ಲೇ ಡಿಸೆಂಬರ್‌.25ರಂದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಅಭಿನಯದ ಮ್ಯಾಕ್ಸ್‌ ಸಿನಿಮಾ ಬಿಡುಗಡೆಯಾಗಿದೆ.

    ಚಿತ್ರದಲ್ಲಿ ಕಿಚ್ಚಿನ ಮ್ಯಾಕ್ಸಿಮಮ್‌ ಮ್ಯಾಕ್ಸ್‌ ಅವತಾರ ನೋಡಿದ ಫ್ಯಾನ್ಸ್‌ ಸುದೀಪ್‌ ಪರ ಜೈಕಾರ ಹಾಕುತ್ತಿದ್ದಾರೆ.

    ಮ್ಯಾಕ್ಸ್‌ ಸಿನಿಮಾದಲ್ಲಿ ವರಲಕ್ಷ್ಮೀ ಶರತ್‌ ಕುಮಾರ್‌, ಉಗ್ರಂ ಮಂಜು, ಸಂಯುಕ್ತಾ ಹೊರನಾಡು ಮುಂತಾದವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

    ಉಳಿದಂತೆ ಪ್ರಮೋದ್‌ ಶೆಟ್ಟಿ, ತೆಲುಗು ನಟ ಸುನೀಲ್‌, ಶರತ್‌ ಲೋಹಿತಾಶ್ವ, ನರೇನ್‌, ಕಾಲಕೇಯ ಪ್ರಭಾಕರ್‌, ಸುಧಾ ಬೆಳವಾಡಿ ಮುಂತಾದವರು ನಟಿಸಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading