Monday, August 31, 2026
spot_img
More
    spot_img
    HomeLatest newsಕೇಂದ್ರ ಬಜೆಟ್ 2025: ಆದಾಯ ತೆರಿಗೆ, ಉದ್ಯೋಗ, ಕೃಷಿ ಮತ್ತು ಆರ್ಥಿಕ ಅಭಿವೃದ್ಧಿಯ ನಿರೀಕ್ಷೆಗಳು

    ಕೇಂದ್ರ ಬಜೆಟ್ 2025: ಆದಾಯ ತೆರಿಗೆ, ಉದ್ಯೋಗ, ಕೃಷಿ ಮತ್ತು ಆರ್ಥಿಕ ಅಭಿವೃದ್ಧಿಯ ನಿರೀಕ್ಷೆಗಳು

    ಬೆಂಗಳೂರು;ಬಿಜೆಪಿ ಸರ್ಕಾರವು ಫೆಬ್ರವರಿ 1ಕ್ಕೆ ಬಜೆಟ್‌ ಮಂಡನೆ ಮಾಡಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌(Budget) ಮಂಡಿಸಲಿದ್ದಾರೆ. ಈಗಾಗಲೇ ಕೇಂದ್ರ ಸರ್ಕಾರವು ಬಜೆಟ್‌ ಮಂಡನೆಗೆ ಬೇಕಾದ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.2025ರ ಬಜೆಟ್‌ಗೆ ಇನ್ನೆರಡು ದಿನಗಳು ಬಾಕಿ ಉಳಿದಿದ್ದು, ಭಾರತದ ಮಧ್ಯಮ ವರ್ಗದ ಮೇಲೆ ನೇರ ಪರಿಣಾಮ ಬೀರುವ ಕ್ರಮಗಳತ್ತ ಎಲ್ಲರ ಕಣ್ಣು ನೆಟ್ಟಿದೆ.ಪ್ರತಿ ವರ್ಷದಂತೆ ಈ ಬಾರಿಯೂ ಹೊಸ ಬಜೆಟ್ ಬಗ್ಗೆ ಜನಸಾಮಾನ್ಯರಲ್ಲಿ ಸಾಕಷ್ಟು ನಿರೀಕ್ಷೆಗಳಿವೆ.ಬಜೆಟ್‌ನಲ್ಲಿರುವ ಘೋಷಣೆಗಳು ಪ್ರತಿಯೊಬ್ಬ ದೇಶವಾಸಿಗಳ ಮೇಲೆ ನೇರ ಪರಿಣಾಮ ಬೀರುತ್ತವೆ. ದಿನನಿತ್ಯದ ಅಗತ್ಯ ವಸ್ತುಗಳ ಬೆಲೆಯಿಂದ ಹಿಡಿದು ಆದಾಯ ತೆರಿಗೆವರೆಗೆ ಎಲ್ಲವೂ ಬಜೆಟ್ ಘೋಷಣೆಯ ಆಧಾರದ ಮೇಲೆ ಬದಲಾಗಬಹುದು.ಈ ಬಜೆಟ್‌ ಬಗ್ಗೆ ವಿವಿಧ ವಲಯಗಳು ಹಲವು ನಿರೀಕ್ಷೆಗಳನ್ನು ಹೊಂದಿವೆ.

    Advertisement

    ಆದಾಯ ತೆರಿಗೆ ವಿನಾಯಿತಿ

    ಮಧ್ಯಮ ವರ್ಗದವರು ಆದಾಯ ತೆರಿಗೆ ಸ್ಲ್ಯಾಬ್‌ಗಳಲ್ಲಿ ಬದಲಾವಣೆ ಮತ್ತು ಹೆಚ್ಚುವರಿ ವಿನಾಯಿತಿಗಳನ್ನು ನಿರೀಕ್ಷಿಸುತ್ತಿದ್ದಾರೆ. ಇದು ಅವರ ಖರ್ಚು ಸಾಮರ್ಥ್ಯವನ್ನು ಹೆಚ್ಚಿಸಲು ಸಹಾಯಕವಾಗಬಹುದು

    ಆರೋಗ್ಯ ಮತ್ತು ಶಿಕ್ಷಣ:

    ಆರೋಗ್ಯ ಸೇವೆಗಳು ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಹೂಡಿಕೆಗಳನ್ನು ಮಾಡುವ ಮೂಲಕ, ಜನಸಾಮಾನ್ಯರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸುವ ನಿರೀಕ್ಷೆಯಿದೆ

    ಮನೆ ಸಾಲ ತೆರಿಗೆ ವಿನಾಯಿತಿ:

    ರಿಯಲ್ ಎಸ್ಟೇಟ್ ವಲಯವು ಮನೆ ಸಾಲದ ಮೇಲಿನ ತೆರಿಗೆ ವಿನಾಯಿತಿಯನ್ನು ಹೆಚ್ಚಿಸುವ ನಿರೀಕ್ಷೆಯಲ್ಲಿದೆ, ಇದು ಮನೆ ಖರೀದಿದಾರರಿಗೆ ಹೆಚ್ಚಿನ ಲಾಭವನ್ನು ನೀಡಬಹುದು.ಮನೆ ಹೊಂದುವವರು ಸೆಕ್ಷನ್ 24(ಬಿ) ಅಡಿಯಲ್ಲಿ ಗೃಹ ಸಾಲಗಳ ಮೇಲಿನ ಹೆಚ್ಚಿನ ಬಡ್ಡಿ ಕಡಿತದ ಮಿತಿಗಳಿಂದ ಪ್ರಯೋಜನ ಪಡೆಯಬಹುದು. ಕನಿಷ್ಠ ಒಂದು ಮನೆಗಾದರೂ, ಪೂರ್ತಿ ಬಡ್ಡಿ ಪಾವತಿಸುವವರಿಗೆ ರಿಯಾಯಿತಿ ಮಿತಿಯನ್ನು ಹೆಚ್ಚಿಸಬೇಕು. ಪ್ರಸ್ತುತ ಈ ಮಿತಿಯನ್ನು 2 ಲಕ್ಷದಿಂದ 3 ಲಕ್ಷಕ್ಕೆ ಹೆಚ್ಚಿಸಬೇಕು ದಿವಾನ್ ಪಿ.ಎನ್‌ನ ವ್ಯವಸ್ಥಾಪಕ ಪಾಲುದಾರ ಧ್ರುವ ಚೋಪ್ರಾ ತಿಳಿಸಿದ್ದಾರೆ.

    ಉದ್ಯೋಗ ಸೃಷ್ಟಿ:

    ಉದ್ಯೋಗಾವಕಾಶಗಳ ಹೆಚ್ಚಳಕ್ಕಾಗಿ ಸರ್ಕಾರದಿಂದ ಹೆಚ್ಚಿನ ಹೂಡಿಕೆಗಳನ್ನು ನಿರೀಕ್ಷಿಸಲಾಗುತ್ತಿದೆ. ಮುಖ್ಯವಾಗಿ ಮೂಲಸೌಕರ್ಯ ಅಭಿವೃದ್ಧಿ ಮತ್ತು ಕೈಗಾರಿಕಾ ವಲಯಗಳಲ್ಲಿ ಹೂಡಿಕೆ ಮಾಡುವ ಮೂಲಕ ಉದ್ಯೋಗ ಸೃಷ್ಟಿಯನ್ನು ಉತ್ತೇಜಿಸಲು ಸಾಧ್ಯ

    ತಂತ್ರಜ್ಞಾನ ಮತ್ತು ಸ್ಟಾರ್ಟ್‌ಅಪ್‌ಗಳು:

    ಸ್ಟಾರ್ಟ್‌ಅಪ್‌ಗಳಿಗೆ ತೆರಿಗೆ ರಿಯಾಯಿತಿಗಳು, ಹೂಡಿಕೆಗಳಿಗೆ ಉತ್ತೇಜನ ಮತ್ತು ತಂತ್ರಜ್ಞಾನ ಅಭಿವೃದ್ಧಿಗೆ ಸಹಾಯ ಮಾಡುವ ನೀತಿಗಳನ್ನು ನಿರೀಕ್ಷಿಸಲಾಗುತ್ತಿದೆ. ಇದು ನಾವೀನ್ಯತೆ ಮತ್ತು ಉದ್ಯಮಶೀಲತೆಯನ್ನು ಉತ್ತೇಜಿಸಲು ಸಹಾಯಕವಾಗಬಹುದು.

    NPS ಕಡಿತ ಮಿತಿ ಹೆಚ್ಚಿಸಬೇಕು

    ಸಂಪೂರ್ಣ ತೆರಿಗೆ ವಿನಾಯಿತಿ ನೀಡಬೇಕು.ಹೆಚ್ಚುವರಿ ಎನ್‌ಪಿಎಸ್ ಕಡಿತದ ಮಿತಿಯನ್ನು ಈಗ ಇರುವಂತಹ 50,000 ರೂಪಾಯಿಯಿಂದ 1 ಲಕ್ಷ ರೂಪಾಯಿಗೆ ಹೆಚ್ಚಿಸಬೇಕು. ಅಲ್ಲದೆ, ವಿತ್‌ಡ್ರಾ ಮಾಡಿದ ಹಣ ಪೂರ್ಣವಾಗಿ ತೆರಿಗೆ ಮುಕ್ತವಾಗಿರಬೇಕು.

    ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ:

    ಕೃಷಿ ವಲಯದಲ್ಲಿ ಬೆಳೆ ವಿಮೆ, ಸುಲಭ ಸಾಲ ಸೌಲಭ್ಯಗಳು ಮತ್ತು ತಂತ್ರಜ್ಞಾನ ಆಧಾರಿತ ಕೃಷಿ ವಿಧಾನಗಳಿಗೆ ಉತ್ತೇಜನ ನೀಡುವ ನಿರೀಕ್ಷೆಯಿದೆ. ಇದು ರೈತರ ಆದಾಯವನ್ನು ಹೆಚ್ಚಿಸಲು ಸಹಾಯಕವಾಗಬಹುದು


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading