Tuesday, August 4, 2026
spot_img
More
    spot_img
    HomeSportsCricketIPL 2025: ಆರ್‌ಸಿಬಿ ಅಬ್ಬರ ಕಂಡು ಕೋಪದಿಂದ ಪೆವಿಲಿಯನ್‌ಗೆ ಎದ್ದುನಡೆದ‌ ಪಂಜಾಬ್ ಕೋಚ್ ರಿಕಿ ಪಾಂಟಿಂಗ್

    IPL 2025: ಆರ್‌ಸಿಬಿ ಅಬ್ಬರ ಕಂಡು ಕೋಪದಿಂದ ಪೆವಿಲಿಯನ್‌ಗೆ ಎದ್ದುನಡೆದ‌ ಪಂಜಾಬ್ ಕೋಚ್ ರಿಕಿ ಪಾಂಟಿಂಗ್

    ಚಂಡೀಗಢ್:‌ ನಿನ್ನೆ ( ಮೇ 29 ) ಮುಲ್ಲಾನ್‌ಪುರ ಕ್ರೀಡಾಂಗಣದಲ್ಲಿ ನಡೆದ ಪಂಜಾಬ್‌ ಕಿಂಗ್ಸ್‌ ಹಾಗೂ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಗಳ ನಡುವಿನ ಒಂದನೇ ಕ್ವಾಲಿಫಯರ್‌ ಪಂದ್ಯದಲ್ಲಿ ಆರ್‌ಸಿಬಿ 8 ವಿಕೆಟ್‌ಗಳ ಭರ್ಜರಿ ಗೆಲುವನ್ನು ದಾಖಲಿಸಿ ಫೈನಲ್‌ಗೆ ಲಗ್ಗೆ ಇಟ್ಟಿದೆ.

    Advertisement

    ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್‌ ಕಿಂಗ್ಸ್‌ ಆರ್‌ಸಿಬಿ ಬೌಲಿಂಗ್‌ ದಾಳಿಗೆ ಮಕಾಡೆ ಮಲಗಿ 14.1 ಓವರ್‌ಗಳಲ್ಲಿ 101 ರನ್‌ಗೆ ಆಲ್‌ಔಟ್‌ ಆಗಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ 102 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು 10 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 106 ರನ್‌ ಕಲೆಹಾಕಿತು.

    ಪಂಜಾಬ್‌ ಕಿಂಗ್ಸ್‌ ಬ್ಯಾಟಿಂಗ್‌ ಆರಂಭಿಸುವುದಕ್ಕೂ ಮುನ್ನ ಇದೊಂದು ಜಿದ್ದಾಜಿದ್ದಿನ ಪಂದ್ಯವಾಗಲಿದೆ ಎಂದೇ ಊಹಿಸಲಾಗಿತ್ತು. ಆದರೆ ಆರ್‌ಸಿಬಿ ಬೌಲಿಂಗ್‌ ದಾಳಿಗೆ ಮಂಕಾದ ಪಂಜಾಬ್‌ ಬೇಗನೆ ವಿಕೆಟ್‌ ಒಪ್ಪಿಸಿ ಮೊದಲ ಇನ್ನಿಂಗ್ಸ್‌ನಲ್ಲೇ ಪಂದ್ಯವನ್ನು ಕೈಚೆಲ್ಲಿತ್ತು. ಪವರ್‌ಪ್ಲೇನಲ್ಲೇ ತನ್ನ 4 ವಿಕೆಟ್‌ಗಳನ್ನು ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿತು. ಪ್ರಿಯನ್ಶ್‌ ಆರ್ಯ 7 (5) ರನ್‌, ಪ್ರಭ್‌ಸಿಮ್ರನ್‌ ಸಿಂಗ್‌ 18 (10) ರನ್‌, ಜೋಶ್‌ ಇಂಗ್ಲಿಸ್‌ 4 (7) ಹಾಗೂ ನಾಯಕ ಶ್ರೇಯಸ್‌ ಐಯ್ಯರ್‌ 2 (3) ರನ್‌ ಗಳಿಸಿ ಔಟ್‌ ಆದರು. ಈ ಮೂಲಕ 6 ಓವರ್‌ಗಳಲ್ಲಿ 48 ರನ್‌ಗೆ 4 ವಿಕೆಟ್‌ ಕಳೆದುಕೊಂಡಿತು.

    ಹೀಗೆ ಆರಂಭದಲ್ಲೇ ವಿಕೆಟ್‌ ಉರುಳಿದ್ದನ್ನು ಕಂಡ ಕೋಚ್‌ ರಿಕಿ ಪಾಂಟಿಂಗ್‌ ಕೋಪದಲ್ಲಿ ಡಗ್‌ಔಟ್‌ನಿಂದ ಎದ್ದು ಪೆವಿಲಿಯನ್‌ನತ್ತ ಆಗ ತಾನೇ ಔಟ್‌ ಆಗಿ ಬಂದಿದ್ದ ನಾಯಕ ಶ್ರೇಯಸ್‌ ಐಯ್ಯರ್‌ ಜತೆ ಚರ್ಚಿಸಲು ತೆರಳಿದರು. ಸದ್ಯ ಈ ಫೊಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading