Saturday, September 19, 2026
spot_img
More
    spot_img
    HomeLatest newsಸ್ಥಗಿತಗೊಂಡಿದ್ದ ಚಾರ್‌ ಧಾಮ್‌ ಯಾತ್ರೆ ಪುನರಾರಂಭ

    ಸ್ಥಗಿತಗೊಂಡಿದ್ದ ಚಾರ್‌ ಧಾಮ್‌ ಯಾತ್ರೆ ಪುನರಾರಂಭ

    ಡೆಹ್ರಾಡೂನ್:‌ ಉತ್ತರಾಖಂಡದಾದ್ಯಂತ ವರುಣಾರ್ಭಟ ಕೊಂಚ ಕಡಿಮೆಯಾಗಿದ್ದು, ಉತ್ತರ ಕಾಶಿಯಲ್ಲಿ ಗಂಗೋತ್ರಿ-ಯಮುನೋತ್ರಿ ದೇವಾಲಯಗಳು ತೆರೆದಿವೆ. ಈ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಚಾರ್‌ ಧಾಮ್‌ ಯಾತ್ರೆ ಪುನರಾರಂಭವಾಗಿದೆ.

    Advertisement

    ಭಾರೀ ಮಳೆ, ಮೇಘಸ್ಫೋಟದ ಹಿನ್ನೆಲೆಯಲ್ಲಿ ಯಾತ್ರೆಯನ್ನು ಒಂದು ದಿನದ ಮಟ್ಟಿಗೆ ಸ್ಥಗಿತಗೊಳಿಸಲಾಗಿತ್ತು. ಇಂದು ಮಳೆಯ ಅಬ್ಬರ ಕೊಂಚ ಕಡಿಮೆಯಾದ ಹಿನ್ನೆಲೆಯಲ್ಲಿ ಚಾರ್‌ ಧಾಮ್‌ ಯಾತ್ರೆ ಮತ್ತೆ ಆರಂಭವಾಗಿದೆ.

    ಈ ಯಾತ್ರೆಗೆ ಸಾಗುವ ಮಾರ್ಗಗಳಲ್ಲಿ ಅಲ್ಲಲ್ಲಿ ಹವಾಮಾನ ಪರಿಸ್ಥಿತಿಯನ್ನು ಆಧರಿಸಿ ವಾಹನಗಳನ್ನು ತಡೆಯುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

    ರಾಜ್ಯದಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿತ್ತು ಈ ಹಿನ್ನೆಲೆಯಲ್ಲಿ ಹರಿದ್ವಾರ, ಖುಷಿಕೇಶ, ರುದ್ರಪ್ರಯಾಗ, ಶ್ರೀನಗರ, ಸೋನ್‌ ಪ್ರಯಾಗ್‌ ಹಾಗೂ ವಿಕಾಸನಗರದಲ್ಲಿ ಯಾತ್ರಿಕರನ್ನು ತಡೆದು ಸುರಕ್ಷಿತ ಸ್ಥಳಗಳಿಗೆ ತೆರಳಲು ವ್ಯವಸ್ಥೆ ಮಾಡಲಾಗಿತ್ತು. ಇಂದು ಮಳೆ ಕಡಿಮೆಯಾಗಿರುವುದರಿಂದ ಯಾತ್ರೆ ಮುಂದುವರಿದಿದೆ.

    ಮ್ಯಾಕ್ಸ್‌ ನಿರ್ದೇಶಕನ ಜತೆ ಮತ್ತೆ ಸುದೀಪ್‌ ಸಿನಿಮಾ; ʼಮ್ಯಾಕ್ಸ್‌ 2ʼ ಇದೇನಾ?

    ಎಐ ಕೃಷಿ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading