Saturday, September 19, 2026
spot_img
More
    spot_img
    HomeLatest newsಈ ಬಾರಿ ಹೊಸ ಸಿಎಂರಿಂದ ದಸರಾ ಉದ್ಘಾಟನೆ ಎಂದ ಅಶೋಕ್‌ಗೆ ಸಿದ್ದರಾಮಯ್ಯ ತಿರುಗೇಟು

    ಈ ಬಾರಿ ಹೊಸ ಸಿಎಂರಿಂದ ದಸರಾ ಉದ್ಘಾಟನೆ ಎಂದ ಅಶೋಕ್‌ಗೆ ಸಿದ್ದರಾಮಯ್ಯ ತಿರುಗೇಟು

    ಮೈಸೂರು: ಈ ಬಾರಿ ಹೊಸ ಮುಖ್ಯಮಂತ್ರಿಯಿಂದ ದಸರಾ ಉದ್ಘಾಟನೆಯಾಗಲಿದೆ ಎಂಬ ವಿಪಕ್ಷ ನಾಯಕ ಆರ್.‌ಅಶೋಕ್‌ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ಈ ಬಾರಿಯ ಮುಖ್ಯಮಂತ್ರಿಯಾಗಿ ನಾನೇ ದಸರಾ ಉದ್ಘಾಟನೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

    Advertisement

    ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನಾನೇ ಮುಖ್ಯಮಂತ್ರಿಯಾಗಿರುತ್ತೇನೆ. ನಾನೇ ಈ ಬಾರಿಯ ದಸರಾವನ್ನೂ ಉದ್ಘಾಟನೆ ಮಾಡುತ್ತೇನೆ. ಇದೇ ಸತ್ಯ. ನಾನೇ ದಸರಾ ಉದ್ಘಾಟಿಸುತ್ತೇನೆ ಎಂದು ಆರ್.‌ಅಶೋಕ್‌ ಹೇಳಿಕೆಗೆ ತಿರುಗೇಟು ನೀಡಿದರು.

    ಇನ್ನು ಬಿಜೆಪಿ ನಾಯಕರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು, ನಾನು ಡಿಸಿಎಂ ಡಿಕೆಶಿ ಇಬ್ಬರೂ ಚೆನ್ನಾಗಿಯೇ ಇದ್ದೇವೆ. ಮುಂದೆಯೇ ಚೆನ್ನಾಗಿಯೇ ಇರುತ್ತೇವೆ ಎಂದು ಹೇಳುತ್ತಾ ಡಿಕೆಶಿ ಅವರ ಕೈ ಎತ್ತಿದರು. ಇಬ್ಬರೂ ಸಂತೋಷದಿಂದಲೇ ಮುಗುಳ್ನಗುತ್ತಾ ಒಗ್ಗಟ್ಟು ಪ್ರದರ್ಶಿಸಿದರು.

    ಇನ್ನು ಸಿಎಂ ಬದಲಾವಣೆ ಬಗ್ಗೆ ಶ್ರೀರಾಮುಲು ಹೇಳಿಕೆಯಲ್ಲಿ ಹುರುಳಿಲ್ಲ. ನಮ್ಮ ಬಗ್ಗೆ ಮಾತನಾಡಲು ಶ್ರೀರಾಮುಲುಗೆ ನೈತಿಕತೆಯಿಲ್ಲ. ಶ್ರೀರಾಮುಲು ಎಷ್ಟು ಸಲ ಸೋತಿಲ್ಲ? ಆಗ ಅವರಿಗೆ ಅವರ ಭವಿಷ್ಯ ಗೊತ್ತಿರಲಿಲ್ಲವೇ? ನಮ್ಮ ಸರ್ಕಾರ ಬಂಡೆ ರೀತಿ ೫ ವರ್ಷ ಇರುತ್ತದೆ. ನಾನು, ಡಿಕೆಶಿ ಚೆನ್ನಾಗಿಯೇ ಇದ್ದೇವೆ. ಒಗ್ಗಟ್ಟಿನಿಂದಲೇ ಇದ್ದೇವೆ. ನಾವು ಯಾರ ಮಾತನ್ನೂ ಕೇಳಲ್ಲ ಎಂದು ಹೇಳಿದರು.

    ಇನ್ನು ಮುಂದುವರಿದು ಮಾತನಾಡಿದ ಅವರು, ರಣದೀಪ್‌ ಸಿಂಗ್‌ ಸುರ್ಜೆವಾಲಾ ಅವರು ಬೆಂಗಳೂರಿಗೆ ಬರುತ್ತಾರೆ, ಬಂದು ಎಲ್ಲರ ಅಹವಾಲು ಕೇಳುತ್ತಾರೆ. ಪಕ್ಷದಲ್ಲಿ ಎಲ್ಲವೂ ಸರಿಯಾಗಿದೆ. ಏನೂ ಸಮಸ್ಯೆಯಿಲ್ಲ. ನಮ್ಮ ಸರ್ಕಾರ ಐದು ವರ್ಷ ಸುಭದ್ರವಾಗಿರುತ್ತದೆ ಎಂದು ಹೇಳಿದರು.

    ಕೆಆರ್‌ಎಸ್‌ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

    ಕೃಷಿ ಎಐ ಕನ್ನಡ ವೆಬ್‌ಸೈಟ್‌ಗೆ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading