Friday, August 7, 2026
spot_img
More
    spot_img
    HomeStateರಾಮನಗರದಲ್ಲಿ ನಡೆದ ಕೃತಜ್ಞತಾ ಸಭೆ: ನಿಖಿಲ್‌ ಕುಮಾರಸ್ವಾಮಿ ಭಾವುಕ ಮಾತು

    ರಾಮನಗರದಲ್ಲಿ ನಡೆದ ಕೃತಜ್ಞತಾ ಸಭೆ: ನಿಖಿಲ್‌ ಕುಮಾರಸ್ವಾಮಿ ಭಾವುಕ ಮಾತು

    ಚನ್ನಪಟ್ಟಣ: ಜಾತ್ಯಾತೀತ ಜನತಾ ದಳದ ಕಾರ್ಯಕರ್ತರ ಜೊತೆಗೂಡಿ ಇಡೀ ರಾಜ್ಯ ಸರ್ಕಾರವನ್ನು ಎದುರಿಸಿದ್ದೇನೆ. ಯಾರೂ ಕೂಡ ನನ್ನ ಮೇಲೆ ಅನುಮಾನ ಪಡುವ ಅಗತ್ಯವಿಲ್ಲ. ಮುಂದೆಯೂ ನಿಮ್ಮ ಜೊತೆ ಕೆಲಸ ಮಾಡುತ್ತೇನೆ ಎಂದು ನಿಖಿಲ್‌ ಕುಮಾರಸ್ವಾಮಿ ಭಾವುಕರಾಗಿದ್ದಾರೆ.

    Advertisement

    ರಾಮನಗರದಲ್ಲಿಂದು ನಡೆದ ಕೃತಜ್ಞತಾ ಸಭೆಯಲ್ಲಿ ಭಾವುಕರಾಗಿ ಮಾತನಾಡಿದ ನಿಖಿಲ್‌ ಕುಮಾರಸ್ವಾಮಿ ಅವರು, ಈ ಉಪಚಾನಾವಣೆಯಲ್ಲಿ ತಾವುಗಳು ತೋರಿಸಿದ ಪ್ರೀತಿಗೆ ನಿಮ್ಮ ಪಾದದ ಮೇಲೆ ಆಣೆ ಮಾಡಿ ನಿಮಗೆ ಧನ್ಯವಾದ ಹೇಳುತ್ತೇನೆ ಎಂದರು.

    ಈ ಜಿಲ್ಲೆಯಿಂದ ಕುಮಾರಸ್ವಾಮಿಯವರು 2 ಬಾರಿ ಮುಖ್ಯಮಂತ್ರಿ ಆಗಿದ್ದಾರೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷದ ಸಂದಿಗ್ಧ ಕಾಲದಲ್ಲಿ ಮಂಡ್ಯ ಕ್ಷೇತ್ರದ ಜನತೆ ತೋರಿಸಿದ ಪ್ರೀತಿಯಿಂದ ಸಂಸದರಾಗಿ ಆಯ್ಕೆಯಾಗಿ ಕೇಂದ್ರ ಸಚಿವರು ಕೂಡ ಆಗಿದ್ದಾರೆ. ಇದಕ್ಕೆ ಮಂಡ್ಯದ ಜನರು ಹಾಗೂ ರಾಮನಗರ ಜಿಲ್ಲೆಯ ಜನರಿಗೆ ಕೃತಜ್ಞತೆ ಸಲ್ಲಿಸಬೇಕು ಎಂದರು.

    ಕಳೆದ 2019ರ ಲೋಕಸಭೆ ಚುನಾವಣೆ ಕಾರಣ ಅಂಬೇಡ್ಕರ್‌ ಭವನದಲ್ಲಿ ನಡೆದಿದ್ದ ಕಾರ್ಯಕರ್ತರ, ಮುಖಂಡರ ಸಭೆಯಲ್ಲಿ ನನ್ನನ್ನು ಗೆಲ್ಲಿಸುವ ಮೂಲಕ ವಿರೋಧಿಗಳಿಗೆ ಉತ್ತರ ನೀಡಬೇಕು ಎಂದು ನಿಮ್ಮಗಳ ಅಪೇಕ್ಷೆ ಇತ್ತು. ಆದರೆ ಕೆಲವು ಕಾರಣಗಳಿಂದ ನನಗೆ ಅಲ್ಲೂ ಕೂಡ ಹಿನ್ನಡೆಯಾಯಿತು. ಇದಕ್ಕೆ ಜನಸಾಮನ್ಯರು ಕಾರಣ ಅಲ್ಲ. ಈಗ ಅದರ ಬಗ್ಗೆ ಚರ್ಚೆ ಮಾಡುವ ಅಗತ್ಯವಿಲ್ಲ ಎಂದರು.

    2004ರಲ್ಲಿ ಜೆಡಿಎಸ್‌ಗೆ 58 ಸ್ಥಾನಗಳು ಬಂದಿದ್ದವು. ಆ ಸಮಯದಲ್ಲಿ ದೊಡ್ಡ ದೊಡ್ಡ ಸಮುದಾಯದ ನಾಯಕರು ಪಕ್ಷದಲ್ಲಿ ಇದ್ದರು. ಆದರೆ ಅವರು ಪಕ್ಷ ತ್ಯಜಿಸಿದ ನಂತರ ಏಕಾಂಗಿಯಾಗಿ ಸನ್ಮಾನ್ಯ ಕುಮಾರಣ್ಣನವರು ಕಳೆದ 20-25 ವರ್ಷಗಳಿಂದ ಪಕ್ಷದ ಉಸ್ತುವಾರಿ ನೋಡಿಕೊಂಡಿದ್ದಾರೆ.

    ಸಮೃದ್ಧ ಕರ್ನಾಟಕವನ್ನು ಮಾಡಬೇಕು ಎಂದು ಕುಮಾರಸ್ವಾಮಿ ತಮ್ಮ ಆರೋಗ್ಯದ ಮೇಲೂ ಗಮನಕೊಡದೆ ದುಡಿಯುತ್ತಿದ್ದಾರೆ. ದೇವೇಗೌಡರ ನೀರಾವರಿ ಕೊಡುಗೆ ರಾಜ್ಯಕ್ಕೆ ತುಂಬಾ ಉಪಯೋಗವಾಗಿದೆ ಎಂದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading