ಸಿಲಿಕಾನ್ ಸಿಟಿಯಲ್ಲಿ ಈಗ ನಿಜವಾದ ಚಳಿಗಾಲ (Cold) ಆರಂಭವಾಗಿದೆ! ಈ ವರ್ಷ ಭಾರೀ ಮಳೆಯಾಗಿದ್ದರಿಂದ ಚಳಿ ಇನ್ನೂ ಹೆಚ್ಚಾಗಿ ಜನರನ್ನು ಕಾಡುತ್ತಿದೆ.ನಗರದಲ್ಲಿ ತಾಪಮಾನವು 16 ಡಿಗ್ರಿ ಸೆಲ್ಸಿಯಸ್ಗೆ (16°C) ಕುಸಿದಿದೆ.
ಕಳೆದ ಶನಿವಾರದಂದು ಬೆಂಗಳೂರಿನಲ್ಲಿ ಕೇವಲ 21.6 ಡಿಗ್ರಿ ಸೆಲ್ಸಿಯಸ್ (21.6°C) ತಾಪಮಾನ ದಾಖಲಾಗಿದೆ. ಇದು ಈ ವರ್ಷದ ಅತ್ಯಂತ ಕಡಿಮೆ ತಾಪಮಾನ ದಾಖಲಾದ ದಿನವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ದಿತ್ವಾ ಚಂಡಮಾರುತದ ಪರಿಣಾಮದಿಂದಾಗಿ ಬೆಂಗಳೂರಿನಲ್ಲಿ ತೀವ್ರ ಚಳಿ ಹೆಚ್ಚಾಗಲು ಕಾರಣವಾಗಿದೆ.
ಶ್ರೀಲಂಕಾದಲ್ಲಿ (Srilanka) ದೊಡ್ಡದಾಗಿ ಅಬ್ಬರಿಸಿದ ‘ದಿತ್ವಾ’ (Ditva) ಚಂಡಮಾರುತ ಈಗ ಭಾರತದ ಕಡೆ ಬಂದಿದೆ. ಈ ಚಂಡಮಾರುತದ ಪರಿಣಾಮವಾಗಿ ನಮ್ಮ ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮತ್ತು ಚಳಿಯ ವಾತಾವರಣ ಉಂಟಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ನವೆಂಬರ್ 30 ರಿಂದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು.ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.ಮುಂದಿನ 2 ದಿನಗಳ ಕಾಲ ಮೋಡ ಕವಿದ ವಾತಾವರಣ ಮತ್ತು ಕೆಲ ಭಾಗಗಳಲ್ಲಿ ಮಳೆಯಾಗಬಹುದು.
ಮಳೆ ನಿರೀಕ್ಷಿತ ಇತರ ಜಿಲ್ಲೆಗಳು: ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಚಾಮರಾಜನಗರ.ಉತ್ತರ ಕನ್ನಡ ಈ ಜಿಲ್ಲೆಯಲ್ಲಿ ಮಳೆಯ ಬದಲಿಗೆ ಚಳಿ ಹೆಚ್ಚಾಗುವ ಸಾಧ್ಯತೆ ಇದೆ.
ಹವಾಮಾನ ಇಲಾಖೆಯು ಕೆಲವು ಕರಾವಳಿ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಮತ್ತು ಇನ್ನು ಕೆಲವೆಡೆ ಆರೆಂಜ್ ಅಲರ್ಟ್ ಘೋಷಿಸಿದೆ. ಮುಂದಿನ 5 ರಿಂದ 7 ದಿನಗಳವರೆಗೆ ಇದೇ ರೀತಿಯ ವಾತಾವರಣ ಮುಂದುವರೆಯುವ ಸಾಧ್ಯತೆ ಇದೆ.ಈ ಚಂಡಮಾರುತವು ಪ್ರಮುಖವಾಗಿ ತಮಿಳುನಾಡು, ಪುದುಚೇರಿ ಮತ್ತು ಆಂಧ್ರ ಪ್ರದೇಶದ ಕರಾವಳಿ ತೀರಕ್ಕೆ ಅಪ್ಪಳಿಸಲಿದೆ.
ಶ್ರೀಲಂಕಾದಲ್ಲಿ ಈ ಸೈಕ್ಲೋನ್ನಿಂದ ಈಗಾಗಲೇ ಸುಮಾರು 159 ಮಂದಿ ಸಾವನ್ನಪ್ಪಿದ್ದಾರೆ. ಹೀಗಾಗಿ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ.ಚಂಡಮಾರುತದಿಂದ ಮಳೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಎಲ್ಲರೂ ಎಚ್ಚರಿಕೆಯಿಂದ ಇರುವುದು ಉತ್ತಮ.
1978 ರಲ್ಲಿ ಗೃಹ ಸಾಲ ಪಡೆದ ಮೊದಲ ಭಾರತೀಯ ಯಾರು? ಇಲ್ಲಿದೆ ಆಸಕ್ತಿಕರ ಮಾಹಿತಿ!
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


