Monday, August 10, 2026
spot_img
More
    spot_img
    HomeTop StoryIPL 2025: ನಿನ್ನೆ ಧೋನಿಗೆ ಎದುರಾಗಿದ್ದ ಕಷ್ಟದ ಚೇಸಿಂಗ್ ಕೊಹ್ಲಿಗೂ ಎದುರಾಗಿತ್ತು; ಆದರೆ ಧೋನಿ ರೀತಿ...

    IPL 2025: ನಿನ್ನೆ ಧೋನಿಗೆ ಎದುರಾಗಿದ್ದ ಕಷ್ಟದ ಚೇಸಿಂಗ್ ಕೊಹ್ಲಿಗೂ ಎದುರಾಗಿತ್ತು; ಆದರೆ ಧೋನಿ ರೀತಿ ಪಂದ್ಯ ಸೋಲಿಸಿರಲಿಲ್ಲ ಕೊಹ್ಲಿ!

    ಗುವಾಹಟಿ: ನಿನ್ನೆ ( ಮಾರ್ಚ್ 30 ) ಇಲ್ಲಿನ ಬರ್ಸಾಪರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 18ನೇ ಆವೃತ್ತಿಯ ಐಪಿಎಲ್‌ನ 11ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ 6 ರನ್‌ಗಳ ಗೆಲುವನ್ನು ಕಂಡಿತು. ಈ ಗೆಲುವಿನ ಮೂಲಕ ಸತತ ಎರಡು ಸೋಲು ಕಂಡಿದ್ದ ರಾಜಸ್ಥಾನ್ ರಾಯಲ್ಸ್ ಟೂರ್ನಿಯಲ್ಲಿ ಗೆಲುವಿನ ಖಾತೆ ತೆರೆಯಿತು.

    Advertisement

    ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 182 ರನ್ ಕಲೆಹಾಕಿ ಚೆನ್ನೈ ಸೂಪರ್ ಕಿಂಗ್ಸ್‌ಗೆ 183 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು.

    ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಒಂಬತ್ತನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಮೂಲಕ ಟ್ರೋಲ್ ಆಗಿದ್ದ ಎಂಎಸ್ ಧೋನಿ ಈ ಪಂದ್ಯದಲ್ಲಿ ಕೊನೆಯ ಓವರ್‌ನಲ್ಲಿ ತಂಡಕ್ಕೆ ಗೆಲ್ಲಲು 6 ಎಸೆತಗಳಲ್ಲಿ 19 ರನ್ ಬೇಕಿದ್ದಾಗ ಸಂದೀಪ್ ಶರ್ಮಾ ಎಸೆದ ಎಸೆತಕ್ಕೆ ದೊಡ್ಡ ಹೊಡೆತ ಬಾರಿಸಲು ಯತ್ನಿಸಿ ಲಾಂಗ್‌ಆನ್‌ನಲ್ಲಿದ್ದ ಶಿಮ್ರಾನ್ ಹೆಟ್ಮೇರ್‌ಗೆ ಕ್ಯಾಚ್ ನೀಡಿ ಔಟ್ ಆದರು.

    ಹೀಗೆ ಎಂಎಸ್ ಧೋನಿ ಔಟ್ ಆಗಿದ್ದನ್ನು ಕ್ರಿಕೆಟ್ ಪ್ರಿಯರು ಟೀಕಿಸುತ್ತಿದ್ದು, ಈ ಹಿಂದೆ ಇದೇ ರೀತಿಯ ಕಷ್ಟಕರವಾದ ಚೇಸ್ ವಿರಾಟ್ ಕೊಹ್ಲಿಗೂ ಬಂದಿತ್ತು. ಆಗ ಕೊಹ್ಲಿ ಪಂದ್ಯವನ್ನು ಗೆಲ್ಲಿಸಿದರು ಎಂದು 2022ರ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧ ಕೊಹ್ಲಿ ಮಾಡಿದ್ದ ಕಷ್ಟಕರ ಚೇಸ್ ಅನ್ನು ಹೋಲಿಸುತ್ತಿದ್ದಾರೆ. ಈ ಕುರಿತ ಹಲವಾರು ಪೋಸ್ಟ್‌ಗಳು ಎಕ್ಸ್‌ನಲ್ಲಿ ಪ್ರಕಟಗೊಂಡಿವೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading