Saturday, September 19, 2026
spot_img
More
    spot_img
    HomeLatest newsಜಾತಿಗಣತಿ: ಸಂಭಾವನೆ ಕುರಿತು ಸರ್ಕಾರಿ ನೌಕರರ ಪ್ರಮುಖ ಬೇಡಿಕೆ

    ಜಾತಿಗಣತಿ: ಸಂಭಾವನೆ ಕುರಿತು ಸರ್ಕಾರಿ ನೌಕರರ ಪ್ರಮುಖ ಬೇಡಿಕೆ

    ಜಾತಿಗಣತಿ ಅಥವ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕೈಗೊಂಡಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025 ಇಂದು ಅಂತ್ಯಗೊಳ್ಳಲಿದೆ. ಸರ್ಕಾರದ ಆದೇಶದಂತೆ ಸಮೀಕ್ಷೆಯಲ್ಲಿ ತೊಡಗಿದ ಸಮೀಕ್ಷೆದಾರರು ಮತ್ತು ಮೇಲ್ವಿಚಾರಕರಿಗೆ ಸಂಭಾವನೆ ನಿಗದಿ ಮಾಡಲಾಗಿದೆ.

    Advertisement

    ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಜನರ (ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ) ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ದಿನಾಂಕ 22.09.2025 ರಿಂದ ಪ್ರಾರಂಭಿಸಲಾಗಿದ್ದು, ದಿನಾಂಕ 31.10.2025ರಂದು ಮುಕ್ತಾಯಗೊಳ್ಳಲಿದೆ ಎಂದು ಈಗಾಗಲೇ ಪ್ರಕಟಣೆ ಮೂಲಕ ಮಾಹಿತಿ ನೀಡಲಾಗಿದೆ.

    ಸಂಭಾವನೆ ವಿಚಾರದಲ್ಲಿ ಪತ್ರ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಾತಿ ಗಣತಿಯಲ್ಲಿ ಪಾಲ್ಗೊಂಡ ಸಿಬ್ಬಂದಿಗಳಿಗೆ ಸಂಭಾವನೆ ನೀಡುವ ವಿಚಾರದಲ್ಲಿ ಆಯುಕ್ತರು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಮತ್ತು ಕಾರ್ಯದರ್ಶಿಗಳು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಇವರಿಗೆ ಪತ್ರವೊಂದನ್ನು ಬರೆದಿದೆ.

    ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಈ ಪತ್ರವನ್ನು ಬರೆದಿದ್ದಾರೆ. ಪತ್ರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯ ನಿರ್ವಹಿಸಿದ ಸಮೀಕ್ಷಾದಾರರಿಗೆ ನೀಡಲಾಗುವ ಸಂಭಾವನೆ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ.

    ಈ ವಿಷಯಕ್ಕೆ ಸಂಬಂಧಿಸಿದಂತೆ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025ರ ಕುಟುಂಬ ಗಣತಿ ಕಾರ್ಯವು ದಿನಾಂಕ 22-09-2025 ರಿಂದ ಆರಂಭವಾಗಿ 31-10-2025ರ ತನಕ ಮುಂದುವರೆದಿದ್ದು, ಗಣತಿ ಕಾರ್ಯದಲ್ಲಿ ನಿಯೋಜನೆಗೊಂಡಿದ್ದ ರಾಜ್ಯದ ಅಧಿಕಾರಿ/ ನೌಕರರು ಅನೇಕ ಸಮಸ್ಯೆ/ ಸವಾಲುಗಳು ಹಾಗೂ ಕಷ್ಟಗಳ ಮಧ್ಯೆಯೂ ಗಣತಿ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿರುತ್ತಾರೆ ಎಂದು ಪತ್ರದಲ್ಲಿ ಹೇಳಿದ್ದಾರೆ.

    ಆಯೋಗವು ಪ್ರತಿ ಮನೆಯ ಗಣತಿ ಕಾರ್ಯಕ್ಕೆ ರೂ. 100 ಗಳ ಸಮೀಕ್ಷಾ ಸಂಭಾವನೆ ನೀಡಲು ತಿಳಿಸಿರುತ್ತದೆ. ಗಣತಿ ಕಾರ್ಯಕ್ಕೆ ನಿಯೋಜನೆಗೊಂಡ ಪ್ರತಿ ನೌಕರರಿಗೆ ಕುಟುಂಬಗಳ ಸಂಖ್ಯೆಯನ್ನು ಹಂಚಿಕೆ ಮಾಡಲಾಗಿರುತ್ತದೆ. ಹಾಗೆಯೇ, ಅಂತಹ ಕುಟುಂಬಗಳ ಗಣತಿ ಕಾರ್ಯದ ಜೊತೆಗೆ ಮಾಹಿತಿ ನಿರಾಕರಿಸಿದ ಕುಟುಂಬಗಳು, ಖಾಲಿ ಮನೆಗಳು ಹಾಗೂ ಇತರೆ UHID ಸಂಖ್ಯೆಗಳ ಗಣತಿ ಕಾರ್ಯವನ್ನೂ ಸಹ ಮಾಡಿರುತ್ತಾರೆ.

    ಆದ್ದರಿಂದ, ಸಮೀಕ್ಷಾ ಕುಟುಂಬಗಳ ಜೊತೆಗೆ, ಮಾಹಿತಿ ನಿರಾಕರಿಸಿದ ಕುಟುಂಬಗಳು, ಖಾಲಿ ಮನೆಗಳು ಹಾಗೂ ಇತರೆ UHID ಗಣತಿ ಸಂಖ್ಯೆಗಳನ್ನು ಸಹ ಒಟ್ಟು ಸಮೀಕ್ಷೆ ಸಂಖ್ಯೆ ಎಂದು ಪರಿಗಣಿಸಿ ಗಣತಿದಾರರು ನಿರ್ವಹಿಸಿರುವ ಒಟ್ಟು ಸಂಖ್ಯೆಯಷ್ಟು ಮನೆಗಳ ಸಂಭಾವನೆಯನ್ನು ವಿಳಂಬಕ್ಕೆ ಅವಕಾಶ ನೀಡದೆ ಮಂಜೂರು ಮಾಡುವಂತೆ ತಮ್ಮಲ್ಲಿ ಕೋರಿದೆ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

    ಸಂಭಾವನೆ ವಿವರ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿದಂತೆ ಕಾರ್ಯ ಮತ್ತು ಮೇಲ್ವಿಚಾರಕರ
    ನಿರ್ವಹಿಸಿರುವ ಸಮೀಕ್ಷಾದಾರರ ಮಾಹಿತಿಯನ್ನು ಒದಗಿಸುವ ಬಗ್ಗೆ ಈಗಾಗಲೇ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರವನ್ನು ಬರೆಯಲಾಗಿದೆ.

    ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಂಡಿರುವ ಸಮೀಕ್ಷೆದಾರರು ಮತ್ತು ಮೇಲ್ವಿಚಾರಕರಿಗೆ ಗೌರವ ಧನವನ್ನು ನಿಗದಿಪಡಿಸಿ ಆದೇಶಿಸಿದೆ. ಸಮೀಕ್ಷಾದಾರರು (Lump-sum ರೂ. 5000 ಹಾಗೂ ಪ್ರತಿ ಮನೆ ಸಮೀಕ್ಷೆಗೆ ರೂ. 100). ಮೇಲ್ವಿಚಾರಕರು 10,000 ರೂ.ಗಳು.

    ಸಮೀಕ್ಷಾದಾರರಿಗೆ ಗೌರವ ಧನ ಪಾವತಿಸಲು ಮೊದಲನೇ ಕಂತಿನಲ್ಲಿ ತಲಾ ರೂ. 5,000 ದಂತೆ ಅನುದಾನ ಬಿಡುಗಡೆ ಮಾಡಲಾಗಿದೆ. ಸಮೀಕ್ಷೆದಾರರಿಗೆ ಬಾಕಿ ಮೊತ್ತ ಹಾಗೂ ಮೇಲ್ವಿಚಾರಕರಿಗೆ ಸಿಗದಿಪಡಿಸಿದ ಗೌರವ ಧನವನ್ನು ಬಿಡುಗಡೆ ಮಾಡಬೇಕಾಗಿದ್ದು, ನಿಗದಿತ ನಮೂನೆಯಲ್ಲಿ ಮಾಹಿತಿ ಒದಗಿಸಲು ಸೂಚಿಸಲಾಗಿದೆ.

    ದಾವಣಗೆರೆ ಮತ್ತು ಮೈಸೂರು ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳಿಂದ ಇದುವರೆಗೆ ಮಾಹಿತಿಯನ್ನು ಸಲ್ಲಿಸಿರುವುದಿಲ್ಲ. ಆದ್ದರಿಂದ ಕೋರಿರುವ ಮಾಹಿತಿಯನ್ನು ಅತೀ ಜರೂರು ಎಂದು ಪರಿಗಣಿಸಿ, ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಕಳುಹಿಸಲು ಸೂಚನೆ ಕೊಡಲಾಗಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading