Friday, September 18, 2026
spot_img
More
    spot_img
    HomeLookback 20242024ರಲ್ಲಿ ಸದ್ದು ಮಾಡಿದ ವಿವಾದಗಳ ಪಟ್ಟಿ

    2024ರಲ್ಲಿ ಸದ್ದು ಮಾಡಿದ ವಿವಾದಗಳ ಪಟ್ಟಿ

    ಬೆಂಗಳೂರು: 2024 ಮುಗಿಯುವ ಹಂತ ತಲುಪಿದೆ. ಹೀಗಾಗಿ 2025ರ ಸ್ವಾಗತಕ್ಕೆ ಸಿದ್ಧತೆಯೂ ನಡೆದಿದೆ. ಆದ್ರೆ 2024ರಲ್ಲಿ ಬಹಳಷ್ಟು ಘಟನೆಗಳು ಸಂಭವಿಸಿದೆ. ಕೆಲವೊಂದು ವಿಚಾರಗಳು ಅಚ್ಚರಿಗೂ ಕಾರಣವಾಗಿವೆ.

    Advertisement

    ರಾಜ್ಯದಲ್ಲಿ ಹಲವು ವಿದ್ಯಮಾನಗಳು ಜರುಗಿವೆ, ಹಲವು ವಿವಾದಗಳು ಸದ್ದು ಮಾಡಿವೆ. ರಾಜ್ಯದ ರಾಜಕೀಯ ನಾಯಕರು ಸೇರಿದಂತೆ ಸ್ವಾಮೀಜಿಗಳು ಕೂಡ ವಿವಾದಾತಕ ಹೇಳಿಕೆ ನೀಡುವ ಮೂಲಕ ವಿವಾದವನ್ನು ತಮ ಮೈಮೇಲೆ ಎಳೆದುಕೊಂಡಿದ್ದರು.

    ಸ್ಯಾಂಡಲ್‍ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‍ನಲ್ಲಿ ಬಂಧನವಾಗಿದ್ದು ಈ ವರ್ಷದ ಅತ್ಯಂತ ಆಘಾತಕಾರಿ ವಿಚಾರಗಳಲ್ಲಿ ಒಂದಾಗಿದೆ. ಸ್ನೇಹಿತೆ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಎಂಬ ಆರೋಪದಲ್ಲಿ ರೇಣುಕಾಸ್ವಾಮಿಯ ಅವರನ್ನು ಬೆಂಗಳೂರಿಗೆ ಕರೆಸಿ ಮಾಡಿರುವ ಆರೋಪ ಮೇಲಿದೆ. ಸದ್ಯ ಜಾಮೀನಿನ ಮೇಲೆ ದರ್ಶನ್ ಹೊರಗಿದ್ದಾರೆ.

    ತಿರುಪತಿ ದೇವಸ್ಥಾನದ ನೈವೇದ್ಯದಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್‍ಮೋಹನ್ ರೆಡ್ಡಿ ವಿರುದ್ಧ ಮುಖ್ಯಮಂತ್ರಿ ಚಂದ್ರುಬಾಬು ನಾಯ್ಡು ಗಂಭೀರ ಆರೋಪ ಮಾಡಿದ್ದರು. ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು.

    ಶಿವಕುಮಾರ್ ಅವರ ಹೆಸರಿನಲ್ಲೇ ಶಿವ ಇದ್ದಾನೆ. ನನ್ನ ಹೆಸರು ಮಲ್ಲಿಕಾರ್ಜುನ ಎಂದರೂ ಶಿವ ಎಂದೇ ಅರ್ಥ. ಆಂಧ್ರಪ್ರದೇಶದ ಶ್ರೀಶೈಲದಲ್ಲಿ ಮಲ್ಲಿಕಾರ್ಜುನ ಎಂಬ ಜ್ಯೋತಿರ್ಲಿಂಗವೂ ಇದೆ. ಶಿವನು ರಾಮ (ಬಿಜೆಪಿ)ನ ಸಮಾನವಾಗಿ ಸ್ಪರ್ಧೆ ಮಾಡಬಹುದು ಎನ್ನುವ ಮೂಲಕ ರಾಮ ಹಾಗೂ ಶಿವನ ನಡುವೆ ಸಂಬಂಧ ಸೃಷ್ಟಿಸಿ ಮಲ್ಲಿಕಾರ್ಜುನ ಖರ್ಗೆ ವಿವಾದಕ್ಕೆ ಕಾರಣರಾಗಿದ್ದರು.

    ಪುಷ್ಪಾ 2 ಸಿನಿಮಾ ಬಿಡುಗಡೆಯಾದಾಗ ನಟ ಅಲ್ಲು ಅರ್ಜುನ್ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಈ ವೇಳೆ ಕಾಲ್ತುಳಿತ ಉಂಟಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಈ ಘಟನೆ ಸಂಬಂಧ ಪೊಲೀಸರು ಅಲ್ಲು ಅರ್ಜುನ್ ಮನೆಗೆ ಬಂದು ಅವರನ್ನು ಬಂಧಿಸಿದ್ದರು.

    ಚಂಡೀಗಢ ವಿಮಾನ ನಿಲ್ದಾಣದಲ್ಲಿ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರಿಗೆ ಸಿಐಎಸ್‍ಎಫ್ ಕಾನ್‍ಸ್ಟೇಬಲ್ ಕುಲ್ವಿಂದರ್ ಕೌರ್ ಕಪಾಳಮೋಕ್ಷ ಮಾಡಿದ್ದರು. ಈ ವಿಷಯ ಸಾಕಷ್ಚು ಸದ್ದು ಮಾಡಿತ್ತು.

    ವಾಕ್ಫ್ ವಿರುದ್ಧ ಹೋರಾಟಕ್ಕೆ ಕರೆ ಕೊಡುವ ಭರದಲ್ಲಿ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ತನ್ನ ಬಣ್ಣಿಸ ಬೇಡ, ಇದಿರ ಹಳಿಯಲು ಬೇಡ ಎಂದು ಸಂದೇಶ ಸಾರಿದ ಬಸವಣ್ಣನ ಸಾವಿನ ವಿಚಾರವನ್ನೇ ರಾಜಕೀಯ ಕೆಸರೆರೆಚಾಟಕ್ಕೆ ಎಳೆತಂದಿದ್ದರು. ನವೆಂಬರ್ 25 ರಂದು ಮಾತನಾಡಿದ್ದ ಅವರು, ಬಸವಣ್ಣನವರ ಹಾಗೆ ನದಿಗೆ ಹಾರಿ ಸಾಯಬೇಕಾಗುತ್ತದೆ ಎಂದು ಹೇಳಿದ್ದರು.

    ಲೇಡಿ ಸೂಪರ್ ಸ್ಟಾರ್ ನಯನತಾರಾ ಹಾಗೂ ನಟ ಧನುಷ್ ನಡುವಿನ ದೊಡ್ಡ ವಿವಾದವೇ ಸೃಷ್ಟಿಯಾಗಿತ್ತು. ನಯನತಾರಾ: ಬಿಯಾಂಡ್ ದ ಫೇರಿ ಟೇಲ್ ಎಂಬ ಸಾಕ್ಷ್ಯಚಿತ್ರದಲ್ಲಿ 2015 ರ ನಾನುಮ್ ರೌಡಿ ಧಾನ್ ಚಿತ್ರದ 3 ಸೆಕೆಂಡುಗಳ ವಿಡಿಯೋ ಬಳಸಿಕೊಂಡಿದ್ದಕ್ಕೆ ನಟ ಧನುಷ್ ಕೋರ್ಟ್ ಮೆಟ್ಟಿಲೇರಿದ್ದರು.

    ನ. 26 ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂದು ಒಕ್ಕಲಿಗ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿವಾದಾತಕ ಹೇಳಿಕೆ ನೀಡಿದ್ದರು. ಇದು ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿತ್ತು.

    ಚನ್ನಪಟ್ಟಣ ಉಪಚುನಾವಣೆ ಅಖಾಡದಲ್ಲಿ ಪ್ರಚಾರ ವೇಳೆ ಸಚಿವ ಜಮೀರ್ ಅಹದ್ ಖಾನ್ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿಯನ್ನು ಕರಿಯ ಎಂದು ಕರೆಯುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದರು. ಚನ್ನಪಟ್ಟಣದಲ್ಲಿ ಯೋಗೇಶ್ವರ್ ಪರ ಪ್ರಚಾರದ ವೇಳೆ ಜಮೀರ್, ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ಮಾಡಿದ್ದರು.

    ವಿಧಾನಪರಿಷತ್‍ನಲ್ಲಿ ಸಿಟಿ ರವಿ ಹಾಗೂ ಸಚಿವೆ ಲಕ್ಷೀ ಹೆಬ್ಬಾಳ್ಕರ್ ನಡುವೆ ಮಾತಿನ ಚಕಮಕಿ ನಡೆದಿತ್ತು. ಆಗ ಸಿಟಿ ರವಿ, ಅಶ್ಲೀಲ ಪದ ಬಳಸಿ ಹೆಬ್ಬಾಳ್ಕರ್ ಅವರನ್ನ ನಿಂದಿಸಿದ್ದಾರೆ ಅನ್ನೋ ಆರೋಪ ಕೇಳಿಬಂತು. ಸಿಟಿ ರವಿ ಅವರನ್ನು ಬಂಧಿಸಲಾಗಿತ್ತು. ರವಿ ಅವರನ್ನು ಲಕ್ಷಿ ಹೆಬ್ಬಾಳ್ಕರ್ ಕೊಲೆಗೆಡುಕ ಎಂದು ನಿಂದಿಸಿದ್ದರು.

    ನಟಿ ಕಂ ಮಾಡೆಲ್ ಪೂನಂ ಪಾಂಡೆ ನಿಧನರಾಗಿದ್ದಾರೆ ಎನ್ನುವ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು, ಈ ವಿಷಯವನ್ನು ಅವರ ಮ್ಯಾನೇಜರ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಆದಾದ ನಂತರ ನಟಿ ತಾನು ಬದುಕಿರುವುದಾಗಿ ತಿಳಿಸಿದ್ದರು.

    ರಾಜ್ಯ ಸಭೆ ಚುನಾವಣೆ ಗೆದ್ದ ಖುಷಿಯ ನಡುವೆ ಕಾಂಗ್ರೆಸ್ ನ ರಾಜ್ಯ ಸಭಾ ಸದಸ್ಯ ನಾಸೀರ್ ಹುಸೇನ್ ಸುತ್ತ ವಿವಾದ ಸುತ್ತುಹಾಕಿಕೊಂಡಿತ್ತು. ನಾಸೀರ್ ಬೆಂಬಲಿಗರು ಗೆಲುವಿನ ಸಂಭ್ರಮಾಚರಣೆ ವೇಳೆ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಜಿಂದಾಬಾದ್ ಕೂಗಿದ್ದರು ಎಂಬ ಗಂಭೀರ ಆರೋಪ ಕೇಳಿ ಬಂದಿತ್ತು.
    ಬೆಂಗಳೂರಿನ ಗೋರಿಪಾಳ್ಯ ಪಾಕಿಸ್ತಾನದಲ್ಲಿ ಇದೆಯಾ ಎಂಬ ಹೈಕೋರ್ಟ್ ನ್ಯಾಯಾಧೀಶರಿಗೆ ಸುಪ್ರಿಂಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಈ ವಿಚಾರ ಕೂಡ ಸಾಕಷ್ಟು ವಿವಾದನ್ನುಂಟು ಮಾಡಿತ್ತು. ಹೈಕೋರ್ಟ್ ನ್ಯಾಯಾಧೀಶ ವಿ.ಶ್ರೀಶಾನಂದ ಅವರು ಗೋರಿಪಾಳ್ಯವನ್ನು ಪಾಕಿಸ್ತಾನಕ್ಕೆ ಹೋಲಿಕೆ ಮಾಡಿದ್ದರು.

    ನ್ಯಾಯಮೂರ್ತಿ ಕೆ.ಹೇಮಾ ಅವರ ವರದಿಯು ಮಲಯಾಳಂ ಚಲನಚಿತ್ರೋದ್ಯಮದಲ್ಲಿ ಕೋಲಾಹಲಕ್ಕೆ ಕಾರಣವಾಗಿತ್ತು. ಚಿತ್ರರಂಗದಲ್ಲಿ ಯುವ ನಟಿಯರಿಗೆ ಲೈಂಗಿಕ ಕಿರುಕುಳ ನೀಡಲಾಗಿತ್ತು ಎಂಬುದನ್ನು ವರದಿಯಲ್ಲಿ ಹೇಳಲಾಗಿತ್ತು.
    ರಾಜ್ಯಸಭೆ ಅಧಿವೇಶನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ ಭಾಷಣದಲ್ಲಿ, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್ ಎಂಬುದು ಇತ್ತೀಚಿನ ದಿನಗಳಲ್ಲಿ ಫ್ಯಾಷನ್ ಆಗಿದೆ. ಅಂಬೇಡ್ಕರ್ ಹೆಸರು ಜಪ ಮಾಡುವ ಬದಲಿಗೆ ದೇವರ ಹೆಸರನ್ನು ಜಪಿಸಿದ್ದರೆ ಏಳೇಳು ಜನದಲ್ಲೂ ಸ್ವರ್ಗ ಪ್ರಾಪ್ತಿಯಾಗುತ್ತಿತ್ತು ಎಂದು ಹೇಳಿದ್ದರು. ಈ ಹೇಳಿಕೆ ಭಾರೀ ವಿರೋಧಕ್ಕೆ ಕಾರಣವಾಗಿತ್ತು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading