Saturday, September 19, 2026
spot_img
More
    spot_img
    HomeJobs2026ರ CBSE 10 ಮತ್ತು 12ನೇ ತರಗತಿ ಬೋರ್ಡ್ ಪರೀಕ್ಷೆಗಳು ಮರುನಿಗದಿ; ಪರಿಷ್ಕೃತ ವೇಳಾಪಟ್ಟಿ ಪ್ರಕಟ

    2026ರ CBSE 10 ಮತ್ತು 12ನೇ ತರಗತಿ ಬೋರ್ಡ್ ಪರೀಕ್ಷೆಗಳು ಮರುನಿಗದಿ; ಪರಿಷ್ಕೃತ ವೇಳಾಪಟ್ಟಿ ಪ್ರಕಟ

    ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು (CBSE) 2026ನೇ ಸಾಲಿನ 10 ಮತ್ತು 12ನೇ ತರಗತಿಯ ವಾರ್ಷಿಕ ಪರೀಕ್ಷಾ ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಮಾರ್ಚ್ 3ರಂದು ನಡೆಯಬೇಕಿದ್ದ ಹಲವು ಪರೀಕ್ಷೆಗಳನ್ನು ಆಡಳಿತಾತ್ಮಕ ಕಾರಣಗಳಿಂದಾಗಿ ಮುಂದೂಡಲಾಗಿದ್ದು, ಪರಿಷ್ಕೃತ ದಿನಾಂಕಗಳನ್ನು ಮಂಡಳಿ ಅಧಿಕೃತವಾಗಿ ಪ್ರಕಟಿಸಿದೆ.

    Advertisement

    ಯಾವ ಪರೀಕ್ಷೆಗಳು ಮುಂದೂಡಲ್ಪಟ್ಟಿವೆ?
    10ನೇ ತರಗತಿ: ಮಾರ್ಚ್ 3ರಂದು ನಡೆಯಬೇಕಿದ್ದ ಟಿಬೆಟಿಯನ್, ಜರ್ಮನ್, ಎನ್‌ಸಿಸಿ (NCC), ಭೋಟಿಯಾ, ಬೋಡೋ, ಜಪಾನೀಸ್, ಸ್ಪ್ಯಾನಿಷ್, ಕಾಶ್ಮೀರಿ, ಮಿಜೋ ಮತ್ತು ಅಕೌಂಟೆನ್ಸಿ ಸೇರಿದಂತೆ ವಿವಿಧ ಭಾಷಾ ಪರೀಕ್ಷೆಗಳನ್ನು ಮಾರ್ಚ್ 11, 2026ಕ್ಕೆ ಮುಂದೂಡಲಾಗಿದೆ.

    12ನೇ ತರಗತಿ: ಮಾರ್ಚ್ 3ರಂದು ನಡೆಯಬೇಕಿದ್ದ ಕಾನೂನು ಅಧ್ಯಯನ (Legal Studies) ಪರೀಕ್ಷೆಯನ್ನು ಏಪ್ರಿಲ್ 10 ಕ್ಕೆ ಮುಂದೂಡಲಾಗಿದೆ

    ಸಿಬಿಎಸ್‌ಇ ಪರೀಕ್ಷಾ ನಿಯಂತ್ರಕರಾದ ಡಾ. ಸಂಯಮ್ ಭಾರದ್ವಾಜ್ ಅವರು ಹೊರಡಿಸಿರುವ ಸುತ್ತೋಲೆಯ ಪ್ರಕಾರ, ಆಡಳಿತಾತ್ಮಕ ಕಾರಣಗಳಿಂದಾಗಿ ಈ ಬದಲಾವಣೆ ಮಾಡಲಾಗಿದೆ. ಈ ಎರಡು ದಿನಾಂಕಗಳನ್ನು ಹೊರತುಪಡಿಸಿ ಉಳಿದ ಪರೀಕ್ಷೆಗಳ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಮಂಡಳಿ ಸ್ಪಷ್ಟಪಡಿಸಿದೆ.ಪರಿಷ್ಕೃತ ದಿನಾಂಕಗಳನ್ನು ವಿದ್ಯಾರ್ಥಿಗಳ ಪ್ರವೇಶ ಪತ್ರಗಳಲ್ಲಿ ಅಳವಡಿಸಲಾಗುವುದು.ಹೊಸ ಬದಲಾವಣೆಯ ಕುರಿತು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ತುರ್ತಾಗಿ ಮಾಹಿತಿ ನೀಡಲು ಶಾಲೆಗಳಿಗೆ ಸೂಚಿಸಲಾಗಿದೆ.

    ಸಿಬಿಎಸ್‌ಇ ಬೋರ್ಡ್ ಪರೀಕ್ಷೆಗಳು ಯಾವಾಗ ಆರಂಭ?

    2026ರ ಸಾಲಿನ ಸಿಬಿಎಸ್‌ಇ ಪರೀಕ್ಷೆಗಳು ಫೆಬ್ರವರಿ 17 ರಿಂದ ಅಧಿಕೃತವಾಗಿ ಆರಂಭವಾಗಲಿವೆ.

    10ನೇ ತರಗತಿ: ಮೊದಲ ದಿನ ಗಣಿತ (Standard and Basic) ಪರೀಕ್ಷೆ ನಡೆಯಲಿದೆ.

    12ನೇ ತರಗತಿ: ಮೊದಲ ದಿನ ಬಯೋಟೆಕ್ನಾಲಜಿ, ಉದ್ಯಮಶೀಲತೆ (Entrepreneurship) ಮತ್ತು ಶಾರ್ಟ್‌ಹ್ಯಾಂಡ್ ವಿಷಯಗಳ ಪರೀಕ್ಷೆಗಳು ನಡೆಯಲಿವೆ.

    ಪರೀಕ್ಷಾ ಸಮಯ:ಮೊದಲ ದಿನದಂದು 10 ಮತ್ತು 12ನೇ ತರಗತಿಯ ಎರಡೂ ಪರೀಕ್ಷೆಗಳು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30 ರವರೆಗೆ ಒಂದೇ ಶಿಫ್ಟ್‌ನಲ್ಲಿ ನಡೆಯಲಿವೆ.

    ಬಿಡಿಎ ಸೂಪರ್‌ವೈಸರ್ ಮನೆ ಮೇಲೆ ಲೋಕಾಯುಕ್ತ ದಾಳಿ: ಕೋಟ್ಯಂತರ ರೂಪಾಯಿ ಅಕ್ರಮ ಆಸ್ತಿ ಪತ್ತೆ



    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading